ಕರಾವಳಿ

ನವೆಂಬರ್ 8ರಂದು ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ಮಂಗಳೂರು: ಭಾರತ ಸರ್ಕಾರದಿಂದ ನೀಡಿರುವ ಪದ್ಮಶ್ರೀ ಪ್ರಶಸ್ತಿಯು ನ.8 ರಂದು ಅಕ್ಷರ ಸಂತ ಹರೇಕಳ ಹಾಜಬ್ಬನವರಿಗೆ ಪ್ರದಾನವಾಗಲಿದೆ. 2020 ನೇ ಸಾಲಿನಲ್ಲಿ ಪ್ರಕಟಿಸಲಾಗಿದ್ದ ಪದ್ಮಶ್ರೀ ಪ್ರಶಸ್ತಿಯ ಪ್ರದಾನ ಕಾರ್ಯಕ್ರಮ ನಡೆದಿರಲಿಲ್ಲ. ಇದೀಗ ನ.8 ರಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರಶಸ್ತಿ ಸ್ವೀಕರಿಸಲು ನ. 8 ರಂದು ದೆಹಲಿಗೆ ಆಗಮಿಸುವಂತೆ ಹರೇಕಳ ಹಾಜಬ್ಬನವರಿಗೆ ಕೇಂದ್ರ ಗೃಹ ಸಚಿವಾಯದಿಂದ ಪತ್ರದ ಮುಖೇನ ಆಹ್ವಾನ ಬಂದಿದೆ.

ಮಂಗಳೂರು ನಗರದಲ್ಲಿ ಕಿತ್ತಳೆ ಹಣ್ಣು ವ್ಯಾಪಾರ ಮಾಡುತ್ತಾ ಅದರಿಂದ ಬಂದ ಹಣವನ್ನು ಒಟ್ಟುಗೂಡಿಸಿ ಹರೇಕಳ ಹಾಜಬ್ಬನವರು ತಮ್ಮ ಊರಿನಲ್ಲಿ ಶಾಲೆ ತೆರೆದಿದ್ದರು. ಅಷ್ಟೇ ಅಲ್ಲದೆ ತಮ್ಮ ಊರಿನಲ್ಲಿ ಶಾಲೆ ಪ್ರಾರಂಭಿಸಲು ಸಾಕಷ್ಟು ಶ್ರಮಪಟ್ಟಿದ್ದರು. ಅವರ ಈ ಸಾಧನೆಯನ್ನು ಗುರುತಿಸಿ ಸರ್ಕಾರ 2020 ರ ಜನವರಿ 25 ರಂದು ಪದ್ಮಶ್ರೀ ಪ್ರಶಸ್ತಿ ಪ್ರಕಟಿಸಿತ್ತು.ಆದರೆ, ಕಾರಣಾಂತರಗಳಿಂದ ಇಲ್ಲಿವರೆಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿರಲಿಲ್ಲ. ನ. 8 ರಂದು ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಹಾಜಬ್ಬನವರು ಶೀಘ್ರವೇ ದೆಹಲಿಗೆ ತೆರಳಲಿದ್ದಾರೆ.

https://www.youtube.com/watch?v=KgTjGn0PCbE&t=91s

Related Articles

Back to top button