
ಸುರತ್ಕಲ್ : ಸುರತ್ಕಲ್ ಟೋಲ್ ಗೆಟ್ ಬಳಿ ಭಾನುವಾರ ನಡೆದ ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು ಖಂಡಿಸಿ ಹಾಗೂ ಅರೋಪಿಗಳಿಗೆ ಠಾಣೆಯಲ್ಲೇ ಜಾಮೀನು ನೀಡಿದನ್ನು ವಿರೋಧಿಸಿ ಕ್ಯಾಂಪಸ್ ಫ್ರೆಂಟ್ ಇಂಡಿಯಾ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಸುರತ್ಕಲ್ ಪೋಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ರು.ಅರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ರು.ಪ್ರತಿಭಟನಾಕಾರರು ಠಾಣೆಗೆ ಮುತ್ತಿಗೆ ಹಾಕುವ ವಿಚಾರ ತಿಳಿದು ಬಂದೋ ಬಸ್ತುವನ್ನು ಏರ್ಪಡಿಸಲಾಗಿತ್ತು. ಪ್ರತಿಭಟನೆ ಸ್ಥಳಕ್ಕೆ ಅಗಮಿಸಿದ ಸುರತ್ಕಲ್ ಠಾಣೆಯ ಇನ್ಸ್ಪೆಕ್ಟರ್ ಮನವಿ ಸ್ವೀಕರಿಸಿ ಪೊಲೀಸ್ ಅಯುಕ್ತರ ಗಮನಕ್ಕೆ ತರುವುದಾಗಿ ಪ್ರತಿಭಟನೆ ನಿರತರಿಗೆ ಭರವಸೆ ನೀಡಿದರು.