ಕರಾವಳಿಸುರತ್ಕಲ್

ಮಂಗಳೂರಿನ ಸುರತ್ಕಲ್ ಬಳಿ ವಿದ್ಯಾರ್ಥಿಗಳ ಮೇಲೆ ಹಲ್ಲೆಗೆ ಯತ್ನ, ನೈತಿಕ ಪೊಲೀಸ್ ಗಿರಿಗೆ ಕಡಿವಾಣ ಹಾಕಲು ರಾಜ್ಯ ಬಿ.ಜೆ.ಪಿ. ಸರ್ಕಾರ ವಿಫಲ – ಶೌವಾದ್ ಗೂನಡ್ಕ

ಸುರತ್ಕಲ್ : ಮಲ್ಪೆಗೆ ಪ್ರವಾಸಕ್ಕೆಂದು ತೆರಳಿದ್ದ ವಿದ್ಯಾರ್ಥಿಗಳನ್ನು ಸುರತ್ಕಲ್ ಎನ್.ಐ.ಟಿ.ಕೆ.ಟೋಲ್ ಗೇಟ್ ಬಳಿ ತಡೆದು ಗೂಂಡಾಗಳು ಹಲ್ಲೆಗೆ ಮುಂದಾಗಿರುವುದು ದ.ಕ.ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿರುವುದಕ್ಕೆ ಸಾಕ್ಷಿಯಾಗಿದೆ. ನೈತಿಕ ಪೊಲೀಸ್ ಗಿರಿಗೆ ಕುಖ್ಯಾತಿಯನ್ನು ಪಡೆದ ಮಂಗಳೂರಿನಲ್ಲೇ ಮತ್ತೊಮ್ಮೆ ಇಂತಹ ಘಟನೆ ನಡೆದಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಹ ವಿಚಾರವಾಗಿದ್ದು, ವಿದ್ಯಾರ್ಥಿಗಳ ಮೇಲೆ ಹಲ್ಲೆಗೆ ಮುಂದಾದ ತಪ್ಪಿತಸ್ಥರ ವಿರುದ್ಧ ಸರ್ಕಾರವು ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಕೆ.ಪಿ.ಸಿ.ಸಿ.ಮಾಧ್ಯಮ ವಕ್ತಾರರಾದ ಶೌವಾದ್ ಗೂನಡ್ಕರವರು ಆಗ್ರಹಿಸಿದ್ದಾರೆ.


ವಿದ್ಯಾರ್ಥಿಗಳಿಂದ ತಪ್ಪುಗಳುಂಟಾಗಿದ್ದಲ್ಲಿ ಕಾನೂನಿನ ಚೌಕಟ್ಟಿನೊಳಗೆ ಅದನ್ನು ಪ್ರಶ್ನಿಸಬೇಕು ಅದು ಬಿಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಮುಂದಾಗಿರುವುದು ಸರಿಯಲ್ಲ, ಇತ್ತೀಚೆಗೆ ಬೆಂಗಳೂರಿನಲ್ಲಿ ಕೂಡ ಇಂತಹ ನೈತಿಕ ಪೊಲೀಸ್ ಗಿರಿಯ ಘಟನೆ ನಡೆದಿದ್ದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದ ಪರಿಣಾಮವಾಗಿ ಮಂಗಳೂರಿನಲ್ಲಿ ಇಂತಹ ಘಟನೆಗಳು ನಡೆಯಲು ಕಾರಣವಾಗಿದೆ. ರಾಜ್ಯ ಗೃಹ ಸಚಿವರ ಬೇಜವಬ್ದಾರಿ ಹೇಳಿಕೆ ಹಾಗೂ ನಡೆಗಳಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುತ್ತಿದೆ ಎಂದು ಶೌವಾದ್ ಗೂನಡ್ಕರವರು ಆರೋಪಿಸಿದ್ದಾರೆ.

Related Articles

Back to top button