ಕರ್ನಾಟಕಬೆಂಗಳೂರು

2023 ರ ವಿಧಾನಸಭೆ ಚುನಾವಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ-ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ವಿಧಾನಸಭೆ ಚುನಾವಣೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪಕ್ಷದ ಆದೇಶ ಪಾಲಿಸುತ್ತೇವೆ. ಆದ್ರೆ, 2023ಕ್ಕೆ ಇನ್ನೂ ಕಾಲವಕಾಶವಿದೆ. ಅಲ್ಲಿವರೆಗೆ ಏನಾಗುತ್ತೋ ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತದಾನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ನಿರ್ಧಾರಕ್ಕೆ ನಾವೆಲ್ಲ ಬದ್ದರಾಗಿರುತ್ತೇವೆ ಎಂದರು.

ಇನ್ನು ಇದೇ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವ್ರ ರಾಜೀನಾಮೆ ಬಗ್ಗೆಯೂ ಮಾತನಾಡಿದ ಅವ್ರು, ‘ಯಡಿಯೂರಪ್ಪನವ್ರು ಸ್ವಯಂ ಪ್ರೇರಣೆಯಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಪಕ್ಷದಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ನಮ್ಮ ಅಭಿಪ್ರಾಯಗಳನ್ನ ಪಕ್ಷದ ವೇದಿಕೆಯಲ್ಲಿ ಯಾರಿಗೆ ಹೇಳಬೇಕೋ ಅವರಿಗೆ ಹೇಳಿದ್ದೇವೆ. ಇನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 60ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ’ ಎಂದರು.

Related Articles

Back to top button