ಕಡಬಕರಾವಳಿ

ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ರಸ್ತೆ ದಾಡುತ್ತಿದ್ದ ಮಹಿಳೆ ಮತ್ತು ಪುಟ್ಟ ಮಗುವಿನ ಮೇಲೆ ಹರಿದ ಬಸ್ಸ್

ಉಪ್ಪಿನಂಗಡಿ : ಚಲಿಸುತ್ತಿದ್ದ ಬಸ್ಸಿನಡಿಗೆ ಸಿಲುಕಿ ತಾಯಿ ಹಾಗೂ ಮಗು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಅ. 11 ರ ಮಂಗಳವಾರ ನಡೆದಿದೆ. ತಾಯಿ-ಮಗು ಬಸ್ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ವೇಳೆ ಧಿಡೀರನೆ ಆಗಮಿಸಿದ ಕೆಎಸ್ಆರ್ ಟಿಸಿ ಬಸ್ ಚಲಿಸಿ ಈ ದುರ್ಘಟನೆ ಸಂಭವಿಸಿದೆ.

ಘಟನೆಯಲ್ಲಿ ತಾಯಿ ಮತ್ತು ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಬೆಳ್ತಂಗಡಿ ತಾಲೂಕಿನ ಶಿರ್ಲಾಲು ನಿವಾಸಿ ಸಿದ್ದೀಕ್ ಎಂಬವರ ಪತ್ನಿ ಸಾಹಿದಾ(25) ವರ್ಷ ಸಾಹಿಲ್ (1) ಎಂಬರವಾಗಿರುತ್ತಾರೆ. ಸ್ಥಳಕ್ಕಾಗಮಿಸಿದ ಉಪ್ಪಿನಂಗಡಿ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

Related Articles

Back to top button